Skip to main content

ಅಷ್ಟಾವಕ್ರಗೀತಾ - ೯

  ವೈರಾಗ್ಯ

ಅಷ್ಟಾವಕ್ರ ಉವಾಚ-

ಕೃತಾಕೃತೇ ಚ ದ್ವಂದ್ವಾನಿ ಕದಾ ಶಾಂತಾನಿ ಕಸ್ಯ ವಾ .
ಏವಂ ಜ್ಞಾತ್ವೇಹ ನಿರ್ವೇದಾದ್ ಭವ ತ್ಯಾಗಪರೋಽವ್ರತೀ .. 9-1..
 

ಈ ಕೆಲಸ ಮಾಡಬೇಕಾದದ್ದು, ಈ ಕೆಲಸ ಮಾಡಬಾರದ್ದು ಎಂಬ ದ್ವಂದ್ವ ಎಂದಿಗೂ ಕೊನೆಯಾಗದು, ಯಾರಿಗೂ ಕೊನೆಯಾಗದು. ಇದನ್ನು ಅರಿತು ನೀನು ತ್ಯಾಗಪರನಾಗಿ, ವಿರಕ್ತನಾಗಿ, ನಿರಾಸಕ್ತನಾಗು.

ಕಸ್ಯಾಪಿ ತಾತ ಧನ್ಯಸ್ಯ ಲೋಕಚೇಷ್ಟಾವಲೋಕನಾತ್ .
ಜೀವಿತೇಚ್ಛಾ ಬುಭುಕ್ಷಾ ಚ ಬುಭುತ್ಸೋಪಶಮಂ ಗತಾಃ .. 9-2..
 

ಯಾರಲ್ಲಿ ಈ ಲೋಕದ ಚೇಷ್ಟೆಗಳನ್ನು ನೋಡಿ (ಅವುಗಳ ನಿರರ್ಥಕತೆಯನ್ನು ಅರಿತು), ಜೀವಿಸುವ ಇಚ್ಛೆ, ಜೀವನವನ್ನು ಭೋಗಿಸುವ ಇಚ್ಛೆ ಮತ್ತು ಜ್ಞಾನದ ಇಚ್ಛೆ ಇವೆಲ್ಲವೂ ನಶಿಸುವದೋ, ಅಂತವನೇ ಧನ್ಯನು.

ಅನಿತ್ಯಂ ಸರ್ವಮೇವೇದಂ ತಾಪತ್ರಿತಯದೂಷಿತಂ .
ಅಸಾರಂ ನಿಂದಿತಂ ಹೇಯಮಿತಿ ನಿಶ್ಚಿತ್ಯ ಶಾಮ್ಯತಿ .. 9-3..
 

ಈ ಜಗದಲ್ಲಿ ಕಾಣುವದೆಲ್ಲ ಅಶಾಶ್ವತ ಮತ್ತು ಮೂರು ಬಗೆಯ ನೋವಿನಿಂದ ತುಂಬಿರುವದು, ನಿಂದನೀಯ, ಸಾರವಿಲ್ಲದ್ದು, ಹೇಯವಾದದ್ದು ಎನ್ನುವ ಸತ್ಯ ತಿಳಿದಾಗ ನೀನು ಶಾಂತನಾಗುವೆ.

ಕೋಽಸೌ ಕಾಲೋ ವಯಃ ಕಿಂ ವಾ ಯತ್ರ ದ್ವಂದ್ವಾನಿ ನೋ ನೃಣಾಂ .
ತಾನ್ಯುಪೇಕ್ಷ್ಯ ಯಥಾಪ್ರಾಪ್ತವರ್ತೀ ಸಿದ್ಧಿಮವಾಪ್ನುಯಾತ್ .. 9-4..
 

 ಮನುಜನಿಗೆ ಯಾವ ವಯಸ್ಸಿನಲ್ಲಿ ಅಥವಾ ಯಾವ ಕಾಲದಲ್ಲಿ ಸುಖ-ದುಃಖಗಳ, ಒಳಿತು-ಕೆಡುಕುಗಳ ದ್ವಂದ್ವ ಇರವದಿಲ್ಲ? ಅವುಗಳನ್ನು ಉಪೇಕ್ಷೆ ಮಾಡಿ, ಯಾವುದು ಪ್ರಾಪ್ತಿಯಾಗಿದೆಯೋ ಅದನ್ನು ಸಮಾಧಾನದಿಂದ ಸ್ವಿಕರಿಸಿ ಸಿದ್ಧಿಯನ್ನು ಗಳಿಸು.

ನಾನಾ ಮತಂ ಮಹರ್ಷೀಣಾಂ ಸಾಧೂನಾಂ ಯೋಗಿನಾಂ ತಥಾ .
ದೃಷ್ಟ್ವಾ ನಿರ್ವೇದಮಾಪನ್ನಃ ಕೋ ನ ಶಾಮ್ಯತಿ ಮಾನವಃ .. 9-5..
 

ಮಹರ್ಷಿಗಳು, ಸಾಧುಗಳು, ಯೋಗಿಗಳು ನಾನಾ ವಿಧದ ಅಭಿಪ್ರಾಯಗಳನ್ನು ಹೇಳುತ್ತಾರೆ. (ಕೆಲವರು ಹೇಳುತ್ತಾರೆ- ಹೋಮ ಮಾಡು. ಇನ್ನು ಕೆಲವರು ಹೇಳುತ್ತಾರೆ - ಮಂತ್ರ ಪಠನ ಮಾಡು. ಕೆಲವರು ಶಿವನನ್ನು ಭಜಿಸು ಎನ್ನುತ್ತಾರೆ. ಕೆಲವರು ಶಕ್ತಿಯನ್ನು, ಇನ್ನೂ ಕೆಲವರು ವಿಷ್ಣುವನ್ನು.) ಇವೆಲ್ಲವನ್ನೂ ನೋಡಿದಾಗ, ಯಾರು ತಾನೆ ಇವೆಲ್ಲವನ್ನೂ ತ್ಯಜಿಸಿ ಶಾಂತವಾಗುವದಿಲ್ಲ?

ಕೃತ್ವಾ ಮೂರ್ತಿಪರಿಜ್ಞಾನಂ ಚೈತನ್ಯಸ್ಯ ನ ಕಿಂ ಗುರುಃ .
ನಿರ್ವೇದಸಮತಾಯುಕ್ತ್ಯಾ ಯಸ್ತಾರಯತಿ ಸಂಸೃತೇಃ .. 9-6..
 

ಚೈತನ್ಯ - ಆತ್ಮದ ಸ್ವರೂಪವನ್ನು ಅರಿತು, ಭೇದಭಾವಗಳಿಲ್ಲದ ಸಮತಾಭಾವದಿಂದ ಯಾರು ತನ್ನನ್ನು ರಕ್ಷಿಸಿಕೊಳ್ಳುತ್ತಾನೋ ಅವನು ಗುರುವಲ್ಲವೇನು?  

ಪಶ್ಯ ಭೂತವಿಕಾರಾಂಸ್ತ್ವಂ ಭೂತಮಾತ್ರಾನ್ ಯಥಾರ್ಥತಃ .
ತತ್ಕ್ಷಣಾದ್ ಬಂಧನಿರ್ಮುಕ್ತಃ ಸ್ವರೂಪಸ್ಥೋ ಭವಿಷ್ಯಸಿ .. 9-7..
 

ಮನ-ಶರೀರ-ಬುದ್ಧಿಗಳ ವಿಕಾರಗಳನ್ನು ಕೇವಲ ಮೂಲಭೂತ ಅಂಶಗಳು, ಮತ್ತೇನೂ ಅಲ್ಲ ಎಂದು ಅರಿತಾಗ, ಆ ಕ್ಷಣವೇ ನೀನು ಬಂಧಮುಕ್ತನಾಗಿ ನೈಜ ಸ್ವರೂಪವನ್ನು ಹೊಂದುತ್ತೀಯಾ.  

ವಾಸನಾ ಏವ ಸಂಸಾರ ಇತಿ ಸರ್ವಾ ವಿಮುಂಚ ತಾಃ .
ತತ್ತ್ಯಾಗೋ ವಾಸನಾತ್ಯಾಗಾತ್ಸ್ಥಿತಿರದ್ಯ ಯಥಾ ತಥಾ .. 9-8..
 

ಆಸೆಯಿಂದಲೇ ಈ ಜಗದ ಬಂಧನಗಳೆಲ್ಲ. ಆಸೆಗಳನ್ನು ತ್ಯಜಿಸಬೇಕು. ಆಸೆ ತ್ಯಜಿಸಿದರೆ ಜಗತ್ತನ್ನು ತ್ಯಜಿಸಿದಂತೇ. ಆಗ ನೀನು ಎಲ್ಲಾದರೂ ಇರಬಹುದು. 

 

ಸಂಪೂರ್ಣ ಕೃತಿಯನ್ನು ಡೌನ್ ಲೋಡ್ ಮಾಡಿ. 

Comments

Popular posts from this blog

ಅಷ್ಟಾವಕ್ರಗೀತಾ - ೧

.. ಶ್ರೀ .. ಅಥ ಶ್ರೀಮದಷ್ಟಾವಕ್ರಗೀತಾ ಪ್ರಾರಭ್ಯತೇ . ಜನಕ ಉವಾಚ .. ಕಥಂ ಜ್ಞಾನಮವಾಪ್ನೋತಿ ಕಥಂ ಮುಕ್ತಿರ್ಭವಿಷ್ಯತಿ . ವೈರಾಗ್ಯಂ ಚ ಕಥಂ ಪ್ರಾಪ್ತಮೇತದ್ ಬ್ರೂಹಿ ಮಮ ಪ್ರಭೋ .. 1-1.. ಶಬ್ದಾರ್ಥ ಪ್ರಾರಭ್ಯತೇ = ಆರಂಭವಾಗುತ್ತದೆ ಜನಕ ಉವಾಚ = ಜನಕನು ಹೇಳಿದನು ಕಥಂ = ಹೇಗೆ ಜ್ಞಾನಮ್ + ಅವಾಪ್ನೋತಿ = ಜ್ಞಾನವನ್ನು ಪಡೆಯಬೇಕು ಮುಕ್ತಿ = ಮೋಕ್ಷ ಭವಿಷ್ಯತಿ = ಆಗುತ್ತದೆ ವೈರಾಗ್ಯ = ವೈರಾಗ್ಯ ಚ =ಮತ್ತು ಪ್ರಾಪ್ತಂ + ಏತತ್ = ಪಡೆಯತಕ್ಕದ್ದು , ಇದನ್ನು ಬ್ರೂಹಿ =ಹೇಳು ಮಮ =ನನ್ನ. ಪ್ರಭೋ = ಪ್ರಭುವೇ ಅನುವಾದ   ಜನಕ ಹೇಳಿದನು. ಜ್ಞಾನವನ್ನು ಹೇಗೆ ಸಂಪಾದಿಸಬೇಕು? ಮುಕ್ತಿಯನ್ನು ಹೇಗೆ ಪಡೆಯಬೇಕು? ವೈರಾಗ್ಯವನ್ನು ಪಡೆಯುವದು ಹೇಗೆ? ಪ್ರಭೂ, ಇದನ್ನು ನನಗೆ ತಿಳಿಸಿಕೊಡಿ. ಜನಕನು ನಮ್ಮೆಲ್ಲರ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳುತ್ತಿದ್ದಾನೆ - ಜ್ಞಾನ ಪಡೆಯುವದು ಹೇಗೆ - ಅಧ್ಯಾತ್ಮ ಜ್ಞಾನ - ಕಬ್ಬಿಣದ ಕಡಲೆ - ಅದನ್ನು ತಿಳಿಯುವದು ಹೇಗೆ? ನಂತರ ಮೋಕ್ಷ ಪಡೆಯುವದು ಹೇಗೆ? ಈ ಸುಖ-ದುಃಖಗಳಿಂದ, ಹುಟ್ಟು-ಸಾವುಗಳಿಂದ, ಜರಾ-ಮೃತ್ಯುಗಳಿಂದ ಹೇಗೆ ಪಾರಾಗುವದು? ನಾನು-ನನ್ನದು ಎಂಬ ಆಶಾ-ಪಾಶದಿಂದ ಹೊರ ಬರುವದು ಹೇಗೆ? ಅಷ್ಟಾವಕ್ರ ಉವಾಚ .. ಮುಕ್ತಿಮಿಚ್ಛಸಿ ಚೇತ್ತಾತ ವಿಷಯಾನ್ ವಿಷವತ್ತ್ಯಜ . ಕ್ಷಮಾರ್ಜವದಯಾತೋಷಸತ್ಯಂ ಪೀಯೂಷವದ್ ಭಜ .. 1-2.. ಶಬ್ದಾರ್ಥ ಮುಕ್ತಿಂ = ಮು...

ಅಷ್ಟಾವಕ್ರಗೀತಾ - ೩

ಆತ್ಮಜ್ಞಾನದ ಅವಲೋಕನ ಅಷ್ಟಾವಕ್ರ ಉವಾಚ .. ಅವಿನಾಶಿನಮಾತ್ಮಾನಮೇಕಂ ವಿಜ್ಞಾಯ ತತ್ತ್ವತಃ . ತವಾತ್ಮಜ್ಞಾನಸ್ಯ ಧೀರಸ್ಯ ಕಥಮರ್ಥಾರ್ಜನೇ ರತಿಃ .. 3-1..  ಶಬ್ದಾರ್ಥ: ಅವಿನಾಶಿನಂ =ವಿನಾಶವಿಲ್ಲದವನನ್ನು;   ಆತ್ಮಾನಂ =ಆತ್ಮನನ್ನು;   ಏಕಂ =ಏಕೈಕನನ್ನು;  ವಿಜ್ಞಾಯ =ತಿಳಿದು;  ತತ್ತ್ವತಃ =ನಿಜ ಸ್ವರೂಪದಲ್ಲಿ;  ತವ =ನಿನ್ನ;  ಆತ್ಮಜ್ಞಾನಸ್ಯ =ಆತ್ಮಜ್ಞಾನಿಯ;  ಧೀರಸ್ಯ =ಧೀರನ;  ಕಥಂ =ಹೇಗೆ;  ಅರ್ಥಾರ್ಜನೇ =ಹಣದ(ಅರ್ಥ) ಗಳಿಕೆಯಲ್ಲಿ(ಅರ್ಜನೇ);  ರತಿಃ =ಮೋಹ ಅನುವಾದ: ಅವಿನಾಶಿಯಾದ, ಅದ್ವೈತವಾದ ಆತ್ಮವನ್ನು ಅರಿತುಕೊಂಡಮೇಲೆ ಆತ್ಮಜ್ಞಾನಿಯಾದ ಧೀರನು, ಸಂಪತ್ತನ್ನು ಗಳಿಸುವದಲ್ಲಿ ಆಸಕ್ತಿಯನ್ನು ಹೇಗೆ ಇರಿಸಿಕೊಳ್ಳುತ್ತಾನೆ? ವಿವರಣೆ: ಆತ್ಮಜ್ಞಾನವನ್ನು ಹುಡುಕುತ್ತ ಜನಕನು ಅದರ ಜೊತೆಗೇ ರಾಜ್ಯಭಾರವನ್ನೂ ಮಾಡುತ್ತಿದ್ದಾನೆ. ಅದಕ್ಕಾಗಿ ಅಷ್ಟಾವಕ್ರ ಮುನಿಯು ಅವನನ್ನು ಪರೀಕ್ಷಿಸುತ್ತ ಕೇಳುತ್ತಾನೆ - ಆತ್ಮಜ್ಞಾನವನ್ನು ಪಡೆದ ಮೇಲೆಯೂ ಹೇಗೆ ಧನಸಂಪಾದನೆಯಲ್ಲಿ ಆಸಕ್ತಿ ಇರುತ್ತದೆ.  ಆತ್ಮಾಜ್ಞಾನಾದಹೋ ಪ್ರೀತಿರ್ವಿಷಯಭ್ರಮಗೋಚರೇ . ಶುಕ್ತೇರಜ್ಞಾನತೋ ಲೋಭೋ ಯಥಾ ರಜತವಿಭ್ರಮೇ .. 3-2.. ಶಬ್ದಾರ್ಥ: ಆತ್ಮ + ಅಜ್ಞಾನಾತ್ =ಆತ್ಮದ ಅಜ್ಞಾನದಿಂದ; ಅಹೋ =ಅಹೋ; ಪ್ರೀತಿಃ =ಪ್ರೀತಿ; ವಿಷಯಭ್ರಮಗೋಚರೇ =ಭ್ರಮೆಯಾದ ವಿಷಯಗಳಲ್ಲಿ; ಶುಕ್ತೇ + ಅಜ್ಞಾನತಃ =ಚಿಪ್...

ಅಷ್ಟಾವಕ್ರ ಗೀತಾ - ೫

ಲಯದ ಉಪದೇಶ ಅಷ್ಟಾವಕ್ರ ಉವಾಚ .. ನ ತೇ ಸಂಗೋಽಸ್ತಿ ಕೇನಾಪಿ ಕಿಂ ಶುದ್ಧಸ್ತ್ಯಕ್ತುಮಿಚ್ಛಸಿ . ಸಂಘಾತವಿಲಯಂ ಕುರ್ವನ್ನೇವಮೇವ ಲಯಂ ವ್ರಜ .. 5-1.. ಅಷ್ಟಾವಕ್ರನು ಜನಕನಿಗೆ ಮೋಕ್ಷದ ಮಾರ್ಗವನ್ನು ತಿಳಿಸಿ ಹೇಳುತ್ತಾ ಹೀಗೆ ಹೇಳುತ್ತಾನೆ- ನೀನು ಶುದ್ಧನು, ನಿನಗೆ ಯಾವುದರ ಸಂಗವೂ ಇಲ್ಲ   ಹೀಗಿರುವಾಗ ಏನನ್ನು ತಾನೇ ತ್ಯಜಿಸಲು ಇಚ್ಛಿಸುವೆ? ನೀನು ಶರೀರ-ಮನ-ಅಹಂಕಾರಗಳ ಮೋಹವನ್ನು ನಾಶವಾಗಿಸಿ ಲಯವನ್ನು, ಮುಕ್ತಿಯನ್ನು ಹೊಂದು ಉದೇತಿ ಭವತೋ ವಿಶ್ವಂ ವಾರಿಧೇರಿವ ಬುದ್ಬುದಃ . ಇತಿ ಜ್ಞಾತ್ವೈಕಮಾತ್ಮಾನಮೇವಮೇವ ಲಯಂ ವ್ರಜ .. 5-2.. ಸಾಗರದಿಂದ ಅಲೆಗಳು ಉದಯಿಸಿದಂತೆ, ಈ ವಿಶ್ವವೆಲ್ಲ ನಿನ್ನಿಂದಲೇ ಉದ್ಭವವಾಗುತ್ತದೆ. ಇದನ್ನು ತಿಳಿದು, ನೀನೇ ಆತ್ಮನೆಂದು ತಿಳಿದು, ಲಯವನ್ನು (ಮೋಕ್ಷವನ್ನು) ಹೊಂದು. ಪ್ರತ್ಯಕ್ಷಮಪ್ಯವಸ್ತುತ್ವಾದ್ ವಿಶ್ವಂ ನಾಸ್ತ್ಯಮಲೇ ತ್ವಯಿ . ರಜ್ಜುಸರ್ಪ ಇವ ವ್ಯಕ್ತಮೇವಮೇವ ಲಯಂ ವ್ರಜ .. 5-3.. ಹಗ್ಗ ಸರ್ಪದಂತೆ ಕಾಣುವಂತೆ, ಪ್ರತ್ಯಕ್ಷವೆನಿಸಿದರೂ ಅವಸ್ತುವಾದದ್ದರಿಂದ (ಮಿಥ್ಯೆಯಾದದ್ದರಿಂದ) ಈ ವಿಶ್ವವು ಅಮಲನಾದ(ಶುದ್ಧನಾದ) ನಿನ್ನೊಳಗೆ ಇಲ್ಲ. ಇದನ್ನು ಅರಿತು ಲಯವನ್ನು ಹೊಂದು. ಸಮದುಃಖಸುಖಃ ಪೂರ್ಣ ಆಶಾನೈರಾಶ್ಯಯೋಃ ಸಮಃ . ಸಮಜೀವಿತಮೃತ್ಯುಃ ಸನ್ನೇವಮೇವ ಲಯಂ ವ್ರಜ .. 5-4.. ನೀನಗೆ ಸುಖ-ದುಃಖಗಳು ಸಮಾನ. ಆಶಾ-ನಿರಾಶೆಗಳು ಸಮಾನ. ಜೀವನ-ಮೃತ್ಯುಗಳು ಸಮಾನ. ಈ ರೀತಿಯವನಾಗಿರುವ ನೀನು ಆತ್ಮದಲ್ಲಿ ಲಯವನ್ನು ಹೊಂದು....