Skip to main content

ಅಷ್ಟಾವಕ್ರಗೀತಾ-೧೨

 ಜನಕನ ಸ್ಥಿತಿ

 ಜನಕ ಉವಾಚ .. 

ಕಾಯಕೃತ್ಯಾಸಹಃ ಪೂರ್ವಂ ತತೋ ವಾಗ್ವಿಸ್ತರಾಸಹಃ .
ಅಥ ಚಿಂತಾಸಹಸ್ತಸ್ಮಾದ್ ಏವಮೇವಾಹಮಾಸ್ಥಿತಃ .. 12-1..

ಜನಕನು ಆತ್ಮಜ್ಞಾನದ ನಂತರದ ತನ್ನ ಅನುಭೂತಿಗಳನ್ನು ವರ್ಣಿಸುತ್ತ ಹೀಗೆ ಹೇಳುತ್ತಾನೆ-

ಮೊದಲು ನಾನು ಕಾರ್ಯಕೃತ್ಯಗಳ ಬಗ್ಗೆ ನಿರಾಸಕ್ತನಾದೆ. ನಂತರ ಅತಿ ಮಾತುಕತೆಯ ಬಗ್ಗೆ ನಿರಾಸಕ್ತನಾದೆ. ನಂತರ ಯೋಚನೆ ಬಗ್ಗೆ ನಿರಾಸಕ್ತನಾದೆ. ಈಗ ನಾನು ಈ ಸ್ಥಿತಿಯಲ್ಲಿ ಇದ್ದೇನೆ. (ಮಾತು, ಕೃತಿ, ಚಿಂತೆ ಇವಲ್ಲವುಗಳಿಂದ ನಿರ್ಲಿಪ್ತನಾಗಿದ್ದೇನೆ)

ಪ್ರೀತ್ಯಭಾವೇನ ಶಬ್ದಾದೇರದೃಶ್ಯತ್ವೇನ ಚಾತ್ಮನಃ .
ವಿಕ್ಷೇಪೈಕಾಗ್ರಹೃದಯ ಏವಮೇವಾಹಮಾಸ್ಥಿತಃ .. 12-2..

ಶಬ್ದ ಇತ್ಯಾದಿ ಬಾಹ್ಯ ವಿಷಯಗಳಿಗೇ ಪ್ರೀತಿಯ ಅಭಾವದಿಂದ, ಆತ್ಮವು ಅನುಭವಕ್ಕೆ ಸಿಗದು ಎಂಬ ಸತ್ಯವನ್ನು ಅರಿತು, ಮನಸ್ಸನ್ನು ಏಕಾಗ್ರವಾಗಿಸಿ ನಾನು ಈ ಸ್ಥಿತಿಯಲ್ಲಿ ಇದ್ದೇನೆ. 

ಸಮಾಧ್ಯಾಸಾದಿವಿಕ್ಷಿಪ್ತೌ ವ್ಯವಹಾರಃ ಸಮಾಧಯೇ .
ಏವಂ ವಿಲೋಕ್ಯ ನಿಯಮಮೇವಮೇವಾಹಮಾಸ್ಥಿತಃ .. 12-3.. .

ಸಮಾಧಿ ಸ್ಥಿತಿ ಪಡೆಯಲು ಪ್ರಯತ್ನ ಪಡಬೇಕು ಯಾಕೆಂದರೆ ಬೇರೆ, ಬೇರೆ ಕವಚಗಳು ಮನಸ್ಸನ್ನು ಗೊಂದಲಗೊಳಿಸುತ್ತವೆ . (ನಾನು ಈ ಶರೀರ, ನಾನು ಈ ಮನಸ್ಸು ಇತ್ಯಾದಿ ಮಿಥ್ಯಾಕವಚಗಳು ಸಮಾಧಿ ಪಡೆಯಲು ಅಡ್ಡಿ ಉಂಟುಮಾಡುತ್ತವೆ). ಈ ನಿಯಮವನ್ನು ನೋಡಿ, ಅರಿತು, ನಾನು ಈ ಸ್ಥಿತಿಯಲ್ಲಿ ಇದ್ದೇನೆ. 

ಹೇಯೋಪಾದೇಯವಿರಹಾದ್ ಏವಂ ಹರ್ಷವಿಷಾದಯೋಃ .
ಅಭಾವಾದದ್ಯ ಹೇ ಬ್ರಹ್ಮನ್ನ್ ಏವಮೇವಾಹಮಾಸ್ಥಿತಃ .. 12-4..

ಹೇ, ಬ್ರಹ್ಮನ್, ಕೆಟ್ಟದ್ದು-ಒಳಿತು ಈ ದ್ವಂದ್ವವಿಲ್ಲದೆ, ಹರ್ಷ-ವಿಷಾದಗಳ ಅನುಪಸ್ಥಿತಿಯಲ್ಲಿ, ನಾನು ಈ ಸ್ಥಿತಿಯಲ್ಲಿ ಇದ್ದೇನೆ. 

ಆಶ್ರಮಾನಾಶ್ರಮಂ ಧ್ಯಾನಂ ಚಿತ್ತಸ್ವೀಕೃತವರ್ಜನಂ .
ವಿಕಲ್ಪಂ ಮಮ ವೀಕ್ಷ್ಯೈತೈರೇವಮೇವಾಹಮಾಸ್ಥಿತಃ .. 12-5..

ಯಾವ ವರ್ಣಾಶ್ರಮಗಳಿಗೂ ಅತಿರಿಕ್ತನಾಗಿರುವೆ, ಧ್ಯಾನ-ಮನೋನಿಗ್ರಹ ಇತ್ಯಾದಿಗಳು ಮನಸ್ಸಿನ ಗೊಂದಲಕ್ಕೆ ಕಾರಣವೆಂದು, ಅರಿತು (ಅವುಗಳಿಗೂ ಅತಿರಿಕ್ತನಾಗಿ) ನಾನು ಈ ಸ್ಥಿತಿಯಲ್ಲಿ ಇದ್ದೇನೆ. (ಧ್ಯಾನ-ಮನೋನಿಗ್ರಹ ಇವೆಲ್ಲ ದೇಹ ಮತ್ತು ಮನಸ್ಸಿಗೆ ಅಂಟಿಕೊಂಡಿವೆ. ಆದರೆ ಆತ್ಮ ಅವುಗಳನ್ನು ಮೀರಿದೆ)

ಕರ್ಮಾನುಷ್ಠಾನಮಜ್ಞಾನಾದ್ ಯಥೈವೋಪರಮಸ್ತಥಾ .
ಬುಧ್ವಾ ಸಮ್ಯಗಿದಂ ತತ್ತ್ವಮೇವಮೇವಾಹಮಾಸ್ಥಿತಃ .. 12-6.. 

ಕರ್ಮಾನುಷ್ಠಾನಗಳು ಹೇಗೆ ಅಜ್ಞಾನದಿಂದ ಆಗುವವೋ, ಹಾಗೆಯೇ ಕರ್ಮಗಳ ನಿಲ್ಲಿಸುವಿಕೆ ಕೂಡ ಅಜ್ಞಾನದಿಂದಲೇ ಆಗುತ್ತದೆ. ಇದನ್ನು ಚೆನ್ನಾಗಿ ಅರಿತು ನಾನು ಈ ಸ್ಥಿತಿಯಲ್ಲಿ ಇದ್ದೇನೆ. 

ಅಚಿಂತ್ಯಂ ಚಿಂತ್ಯಮಾನೋಽಪಿ ಚಿಂತಾರೂಪಂ ಭಜತ್ಯಸೌ .
ತ್ಯಕ್ತ್ವಾ ತದ್ಭಾವನಂ ತಸ್ಮಾದ್ ಏವಮೇವಾಹಮಾಸ್ಥಿತಃ .. 12-7.. 

ಅಚಿಂತ್ಯನಾದ ಬ್ರಹ್ಮನನ್ನು ಚಿಂತಿಸುತ್ತಿದ್ದರೂ ಮನುಷ್ಯನು ಚಿಂತಾಮಯ ರೂಪವನ್ನು ಹೊಂದುತ್ತಾನೆ. ಅದಕ್ಕಾಗಿ ಚಿಂತಿಸುವದನ್ನೂ ತ್ಯಜಿಸಿ ನಾನು ಈ (ಆತ್ಮಸ್ವರೂಪದಲ್ಲಿ) ಇದ್ದೇನೆ.

ಏವಮೇವ ಕೃತಂ ಯೇನ ಸ ಕೃತಾರ್ಥೋ ಭವೇದಸೌ .
ಏವಮೇವ ಸ್ವಭಾವೋ ಯಃ ಸ ಕೃತಾರ್ಥೋ ಭವೇದಸೌ .. 12-8..

ಯಾರು ಸಾಧನೆಗಳನ್ನು ಮಾಡಿ, ಆತ್ಮಸ್ವರೂಪವನ್ನು ಪಡೆಯುತ್ತಾನೋ, ಅವನು ಕೃತಾರ್ಥನು. ಯಾರು ಸ್ವಭಾಹತಃ ಆತ್ಮಸ್ವರೂಪದಲ್ಲಿರುತ್ತಾನೋ, ಅವನೂ ಕೃತಾರ್ಥನು.


ಸಂಪೂರ್ಣ ಕೃತಿಯನ್ನು ಡೌನ್ ಲೋಡ್ ಮಾಡಿ.

Comments

Popular posts from this blog

ಅಷ್ಟಾವಕ್ರಗೀತಾ - ೧

.. ಶ್ರೀ .. ಅಥ ಶ್ರೀಮದಷ್ಟಾವಕ್ರಗೀತಾ ಪ್ರಾರಭ್ಯತೇ . ಜನಕ ಉವಾಚ .. ಕಥಂ ಜ್ಞಾನಮವಾಪ್ನೋತಿ ಕಥಂ ಮುಕ್ತಿರ್ಭವಿಷ್ಯತಿ . ವೈರಾಗ್ಯಂ ಚ ಕಥಂ ಪ್ರಾಪ್ತಮೇತದ್ ಬ್ರೂಹಿ ಮಮ ಪ್ರಭೋ .. 1-1.. ಶಬ್ದಾರ್ಥ ಪ್ರಾರಭ್ಯತೇ = ಆರಂಭವಾಗುತ್ತದೆ ಜನಕ ಉವಾಚ = ಜನಕನು ಹೇಳಿದನು ಕಥಂ = ಹೇಗೆ ಜ್ಞಾನಮ್ + ಅವಾಪ್ನೋತಿ = ಜ್ಞಾನವನ್ನು ಪಡೆಯಬೇಕು ಮುಕ್ತಿ = ಮೋಕ್ಷ ಭವಿಷ್ಯತಿ = ಆಗುತ್ತದೆ ವೈರಾಗ್ಯ = ವೈರಾಗ್ಯ ಚ =ಮತ್ತು ಪ್ರಾಪ್ತಂ + ಏತತ್ = ಪಡೆಯತಕ್ಕದ್ದು , ಇದನ್ನು ಬ್ರೂಹಿ =ಹೇಳು ಮಮ =ನನ್ನ. ಪ್ರಭೋ = ಪ್ರಭುವೇ ಅನುವಾದ   ಜನಕ ಹೇಳಿದನು. ಜ್ಞಾನವನ್ನು ಹೇಗೆ ಸಂಪಾದಿಸಬೇಕು? ಮುಕ್ತಿಯನ್ನು ಹೇಗೆ ಪಡೆಯಬೇಕು? ವೈರಾಗ್ಯವನ್ನು ಪಡೆಯುವದು ಹೇಗೆ? ಪ್ರಭೂ, ಇದನ್ನು ನನಗೆ ತಿಳಿಸಿಕೊಡಿ. ಜನಕನು ನಮ್ಮೆಲ್ಲರ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳುತ್ತಿದ್ದಾನೆ - ಜ್ಞಾನ ಪಡೆಯುವದು ಹೇಗೆ - ಅಧ್ಯಾತ್ಮ ಜ್ಞಾನ - ಕಬ್ಬಿಣದ ಕಡಲೆ - ಅದನ್ನು ತಿಳಿಯುವದು ಹೇಗೆ? ನಂತರ ಮೋಕ್ಷ ಪಡೆಯುವದು ಹೇಗೆ? ಈ ಸುಖ-ದುಃಖಗಳಿಂದ, ಹುಟ್ಟು-ಸಾವುಗಳಿಂದ, ಜರಾ-ಮೃತ್ಯುಗಳಿಂದ ಹೇಗೆ ಪಾರಾಗುವದು? ನಾನು-ನನ್ನದು ಎಂಬ ಆಶಾ-ಪಾಶದಿಂದ ಹೊರ ಬರುವದು ಹೇಗೆ? ಅಷ್ಟಾವಕ್ರ ಉವಾಚ .. ಮುಕ್ತಿಮಿಚ್ಛಸಿ ಚೇತ್ತಾತ ವಿಷಯಾನ್ ವಿಷವತ್ತ್ಯಜ . ಕ್ಷಮಾರ್ಜವದಯಾತೋಷಸತ್ಯಂ ಪೀಯೂಷವದ್ ಭಜ .. 1-2.. ಶಬ್ದಾರ್ಥ ಮುಕ್ತಿಂ = ಮು...

ಅಷ್ಟಾವಕ್ರಗೀತಾ - ೩

ಆತ್ಮಜ್ಞಾನದ ಅವಲೋಕನ ಅಷ್ಟಾವಕ್ರ ಉವಾಚ .. ಅವಿನಾಶಿನಮಾತ್ಮಾನಮೇಕಂ ವಿಜ್ಞಾಯ ತತ್ತ್ವತಃ . ತವಾತ್ಮಜ್ಞಾನಸ್ಯ ಧೀರಸ್ಯ ಕಥಮರ್ಥಾರ್ಜನೇ ರತಿಃ .. 3-1..  ಶಬ್ದಾರ್ಥ: ಅವಿನಾಶಿನಂ =ವಿನಾಶವಿಲ್ಲದವನನ್ನು;   ಆತ್ಮಾನಂ =ಆತ್ಮನನ್ನು;   ಏಕಂ =ಏಕೈಕನನ್ನು;  ವಿಜ್ಞಾಯ =ತಿಳಿದು;  ತತ್ತ್ವತಃ =ನಿಜ ಸ್ವರೂಪದಲ್ಲಿ;  ತವ =ನಿನ್ನ;  ಆತ್ಮಜ್ಞಾನಸ್ಯ =ಆತ್ಮಜ್ಞಾನಿಯ;  ಧೀರಸ್ಯ =ಧೀರನ;  ಕಥಂ =ಹೇಗೆ;  ಅರ್ಥಾರ್ಜನೇ =ಹಣದ(ಅರ್ಥ) ಗಳಿಕೆಯಲ್ಲಿ(ಅರ್ಜನೇ);  ರತಿಃ =ಮೋಹ ಅನುವಾದ: ಅವಿನಾಶಿಯಾದ, ಅದ್ವೈತವಾದ ಆತ್ಮವನ್ನು ಅರಿತುಕೊಂಡಮೇಲೆ ಆತ್ಮಜ್ಞಾನಿಯಾದ ಧೀರನು, ಸಂಪತ್ತನ್ನು ಗಳಿಸುವದಲ್ಲಿ ಆಸಕ್ತಿಯನ್ನು ಹೇಗೆ ಇರಿಸಿಕೊಳ್ಳುತ್ತಾನೆ? ವಿವರಣೆ: ಆತ್ಮಜ್ಞಾನವನ್ನು ಹುಡುಕುತ್ತ ಜನಕನು ಅದರ ಜೊತೆಗೇ ರಾಜ್ಯಭಾರವನ್ನೂ ಮಾಡುತ್ತಿದ್ದಾನೆ. ಅದಕ್ಕಾಗಿ ಅಷ್ಟಾವಕ್ರ ಮುನಿಯು ಅವನನ್ನು ಪರೀಕ್ಷಿಸುತ್ತ ಕೇಳುತ್ತಾನೆ - ಆತ್ಮಜ್ಞಾನವನ್ನು ಪಡೆದ ಮೇಲೆಯೂ ಹೇಗೆ ಧನಸಂಪಾದನೆಯಲ್ಲಿ ಆಸಕ್ತಿ ಇರುತ್ತದೆ.  ಆತ್ಮಾಜ್ಞಾನಾದಹೋ ಪ್ರೀತಿರ್ವಿಷಯಭ್ರಮಗೋಚರೇ . ಶುಕ್ತೇರಜ್ಞಾನತೋ ಲೋಭೋ ಯಥಾ ರಜತವಿಭ್ರಮೇ .. 3-2.. ಶಬ್ದಾರ್ಥ: ಆತ್ಮ + ಅಜ್ಞಾನಾತ್ =ಆತ್ಮದ ಅಜ್ಞಾನದಿಂದ; ಅಹೋ =ಅಹೋ; ಪ್ರೀತಿಃ =ಪ್ರೀತಿ; ವಿಷಯಭ್ರಮಗೋಚರೇ =ಭ್ರಮೆಯಾದ ವಿಷಯಗಳಲ್ಲಿ; ಶುಕ್ತೇ + ಅಜ್ಞಾನತಃ =ಚಿಪ್...

ಅಷ್ಟಾವಕ್ರ ಗೀತಾ - ೫

ಲಯದ ಉಪದೇಶ ಅಷ್ಟಾವಕ್ರ ಉವಾಚ .. ನ ತೇ ಸಂಗೋಽಸ್ತಿ ಕೇನಾಪಿ ಕಿಂ ಶುದ್ಧಸ್ತ್ಯಕ್ತುಮಿಚ್ಛಸಿ . ಸಂಘಾತವಿಲಯಂ ಕುರ್ವನ್ನೇವಮೇವ ಲಯಂ ವ್ರಜ .. 5-1.. ಅಷ್ಟಾವಕ್ರನು ಜನಕನಿಗೆ ಮೋಕ್ಷದ ಮಾರ್ಗವನ್ನು ತಿಳಿಸಿ ಹೇಳುತ್ತಾ ಹೀಗೆ ಹೇಳುತ್ತಾನೆ- ನೀನು ಶುದ್ಧನು, ನಿನಗೆ ಯಾವುದರ ಸಂಗವೂ ಇಲ್ಲ   ಹೀಗಿರುವಾಗ ಏನನ್ನು ತಾನೇ ತ್ಯಜಿಸಲು ಇಚ್ಛಿಸುವೆ? ನೀನು ಶರೀರ-ಮನ-ಅಹಂಕಾರಗಳ ಮೋಹವನ್ನು ನಾಶವಾಗಿಸಿ ಲಯವನ್ನು, ಮುಕ್ತಿಯನ್ನು ಹೊಂದು ಉದೇತಿ ಭವತೋ ವಿಶ್ವಂ ವಾರಿಧೇರಿವ ಬುದ್ಬುದಃ . ಇತಿ ಜ್ಞಾತ್ವೈಕಮಾತ್ಮಾನಮೇವಮೇವ ಲಯಂ ವ್ರಜ .. 5-2.. ಸಾಗರದಿಂದ ಅಲೆಗಳು ಉದಯಿಸಿದಂತೆ, ಈ ವಿಶ್ವವೆಲ್ಲ ನಿನ್ನಿಂದಲೇ ಉದ್ಭವವಾಗುತ್ತದೆ. ಇದನ್ನು ತಿಳಿದು, ನೀನೇ ಆತ್ಮನೆಂದು ತಿಳಿದು, ಲಯವನ್ನು (ಮೋಕ್ಷವನ್ನು) ಹೊಂದು. ಪ್ರತ್ಯಕ್ಷಮಪ್ಯವಸ್ತುತ್ವಾದ್ ವಿಶ್ವಂ ನಾಸ್ತ್ಯಮಲೇ ತ್ವಯಿ . ರಜ್ಜುಸರ್ಪ ಇವ ವ್ಯಕ್ತಮೇವಮೇವ ಲಯಂ ವ್ರಜ .. 5-3.. ಹಗ್ಗ ಸರ್ಪದಂತೆ ಕಾಣುವಂತೆ, ಪ್ರತ್ಯಕ್ಷವೆನಿಸಿದರೂ ಅವಸ್ತುವಾದದ್ದರಿಂದ (ಮಿಥ್ಯೆಯಾದದ್ದರಿಂದ) ಈ ವಿಶ್ವವು ಅಮಲನಾದ(ಶುದ್ಧನಾದ) ನಿನ್ನೊಳಗೆ ಇಲ್ಲ. ಇದನ್ನು ಅರಿತು ಲಯವನ್ನು ಹೊಂದು. ಸಮದುಃಖಸುಖಃ ಪೂರ್ಣ ಆಶಾನೈರಾಶ್ಯಯೋಃ ಸಮಃ . ಸಮಜೀವಿತಮೃತ್ಯುಃ ಸನ್ನೇವಮೇವ ಲಯಂ ವ್ರಜ .. 5-4.. ನೀನಗೆ ಸುಖ-ದುಃಖಗಳು ಸಮಾನ. ಆಶಾ-ನಿರಾಶೆಗಳು ಸಮಾನ. ಜೀವನ-ಮೃತ್ಯುಗಳು ಸಮಾನ. ಈ ರೀತಿಯವನಾಗಿರುವ ನೀನು ಆತ್ಮದಲ್ಲಿ ಲಯವನ್ನು ಹೊಂದು....