Skip to main content

ಅಷ್ಟಾವಕ್ರಗೀತೆ - ೧೪

 ಶಾಂತಿ

ಜನಕ ಉವಾಚ- 

ಪ್ರಕೃತ್ಯಾ ಶೂನ್ಯಚಿತ್ತೋ ಯಃ ಪ್ರಮಾದಾದ್ ಭಾವಭಾವನಃ .
ನಿದ್ರಿತೋ ಬೋಧಿತ ಇವ ಕ್ಷೀಣಸಂಸ್ಮರಣೋ ಹಿ ಸಃ .. ೧೪-೧..

ಯಾರು ವಿಷಯಗಳಲ್ಲಿ ಸ್ವಭಾವತಃ ಶೂನ್ಯಚಿತ್ತನಾಗಿ, ರಾಗ-ದ್ವೇಷಗಳಿಂದ ಮುಕ್ತನಾಗಿರುತ್ತಾನೋ, ಅವನು ಪ್ರಮಾದವಶಾತ್ ವಿಷಯ ರಾಗ ದ್ವೇಷಗಳ ಬಗ್ಗೆ ಯೋಚಿಸಿದರೂ,   ನಿದ್ರಿತನಾದವನಾದರೂ ಜಾಗೃತನಂತೆ ಅವನು ಆ ರಾಗ-ದ್ವೇಷಗಳಿಂದ ಪರಿಣಾಮಿತನಾಗುವದಿಲ್ಲ.

ಕ್ವ ಧನಾನಿ ಕ್ವ ಮಿತ್ರಾಣಿ ಕ್ವ ಮೇ ವಿಷಯದಸ್ಯವಃ .
ಕ್ವ ಶಾಸ್ತ್ರಂ ಕ್ವ ಚ ವಿಜ್ಞಾನಂ ಯದಾ ಮೇ ಗಲಿತಾ ಸ್ಪೃಹಾ .. ೧೪-೨..

ನನ್ನಲ್ಲಿ ಆಸೆಗಳು ನಾಶವಾಗಿ ಹೋದ ಮೇಲೆ, ಧನವೆಲ್ಲಿ, ಮಿತ್ರರೆಲ್ಲಿ, ಲೌಕಿಕ ಆಸೆಗಳ ರೂಪದ ಕಳ್ಳರೆಲ್ಲಿ, ಶಾಸ್ತ್ರವೆಲ್ಲಿ, ಜ್ಞಾನ-ವಿಜ್ಞಾನವೆಲ್ಲಿ? (ಆತ್ಮಸಾಕ್ಷಾತ್ಕಾರವಾದ ಮೇಲೆ ನನಗೆ ಇವು ಯಾವುದರಲ್ಲೂ ಆಸಕ್ತಿಯೇ ಉಳಿದಿಲ್ಲ.) 

ವಿಜ್ಞಾತೇ ಸಾಕ್ಷಿಪುರುಷೇ ಪರಮಾತ್ಮನಿ ಚೇಶ್ವರೇ .
ನೈರಾಶ್ಯೇ ಬಂಧಮೋಕ್ಷೇ ಚ ನ ಚಿಂತಾ ಮುಕ್ತಯೇ ಮಮ .. ೧೪-೩..

ಸಾಕ್ಷಿಪುರುಷನಾದ, ಪರಮಾತ್ಮನಾದ ಈಶ್ವರನನ್ನು ಅರಿತ ಮೇಲೆ, ನನಗೆ ಮೋಕ್ಷದಲ್ಲಿ ಆಸಕ್ತಿಯಿಲ್ಲ. ಮುಕ್ತಿ ದೊರಕಬೇಕೆಂಬ ಚಿಂತೆ ಕೂಡ ಇಲ್ಲ.

ಎಲ್ಲಾ ಆಸೆಗಳಂತೆ ಮುಕ್ತಿ ದೊರಕಬೇಕೆಂಬುದೂ ಆಸೆಯೇ. ಆದರೆ ಪರಮಾತ್ಮನನ್ನು ಅರಿತಮೇಲೆ ನನಗೆ ಮುಕ್ತಿಯ ಬಯಕೆಯೂ ಇಲ್ಲ. 

ಅಂತರ್ವಿಕಲ್ಪಶೂನ್ಯಸ್ಯ ಬಹಿಃ ಸ್ವಚ್ಛಂದಚಾರಿಣಃ .
ಭ್ರಾಂತಸ್ಯೇವ ದಶಾಸ್ತಾಸ್ತಾಸ್ತಾದೃಶಾ ಏವ ಜಾನತೇ .. ೧೪-೪..

ಅಂತರಂಗದಲ್ಲಿ ವಿಕಲ್ಪರಹಿತನಾದವನು, ಬಾಹ್ಯದಲ್ಲಿ ಭ್ರಾಂತನಂತೆ ಸ್ವಚ್ಛಂದದಿಂದ ವ್ಯವಹರಿಸಿದರೂ ಸಹ, ಅವನು ಪರಿಸ್ಥಿತಿಯನ್ನು ಅವನಂತವರು (ಅವನಂತೆ ಆತ್ಮಸಾಕ್ಷಾತ್ಕಾರವಾದವರು) ಮಾತ್ರ ಅರಿಯಲು ಸಾಧ್ಯ. (ಅಂತಹ ಜ್ಞಾನಿಯನ್ನು ಅರಿಯಲು ಅಜ್ಞಾನಿಗಳಿಂದ ಸಾಧ್ಯವಿಲ್ಲ).


ಸಂಪೂರ್ಣ ಕೃತಿಯನ್ನು ಡೌನ್ ಲೋಡ್ ಮಾಡಿ.

Comments

Popular posts from this blog

ಅಷ್ಟಾವಕ್ರಗೀತಾ - ೧

.. ಶ್ರೀ .. ಅಥ ಶ್ರೀಮದಷ್ಟಾವಕ್ರಗೀತಾ ಪ್ರಾರಭ್ಯತೇ . ಜನಕ ಉವಾಚ .. ಕಥಂ ಜ್ಞಾನಮವಾಪ್ನೋತಿ ಕಥಂ ಮುಕ್ತಿರ್ಭವಿಷ್ಯತಿ . ವೈರಾಗ್ಯಂ ಚ ಕಥಂ ಪ್ರಾಪ್ತಮೇತದ್ ಬ್ರೂಹಿ ಮಮ ಪ್ರಭೋ .. 1-1.. ಶಬ್ದಾರ್ಥ ಪ್ರಾರಭ್ಯತೇ = ಆರಂಭವಾಗುತ್ತದೆ ಜನಕ ಉವಾಚ = ಜನಕನು ಹೇಳಿದನು ಕಥಂ = ಹೇಗೆ ಜ್ಞಾನಮ್ + ಅವಾಪ್ನೋತಿ = ಜ್ಞಾನವನ್ನು ಪಡೆಯಬೇಕು ಮುಕ್ತಿ = ಮೋಕ್ಷ ಭವಿಷ್ಯತಿ = ಆಗುತ್ತದೆ ವೈರಾಗ್ಯ = ವೈರಾಗ್ಯ ಚ =ಮತ್ತು ಪ್ರಾಪ್ತಂ + ಏತತ್ = ಪಡೆಯತಕ್ಕದ್ದು , ಇದನ್ನು ಬ್ರೂಹಿ =ಹೇಳು ಮಮ =ನನ್ನ. ಪ್ರಭೋ = ಪ್ರಭುವೇ ಅನುವಾದ   ಜನಕ ಹೇಳಿದನು. ಜ್ಞಾನವನ್ನು ಹೇಗೆ ಸಂಪಾದಿಸಬೇಕು? ಮುಕ್ತಿಯನ್ನು ಹೇಗೆ ಪಡೆಯಬೇಕು? ವೈರಾಗ್ಯವನ್ನು ಪಡೆಯುವದು ಹೇಗೆ? ಪ್ರಭೂ, ಇದನ್ನು ನನಗೆ ತಿಳಿಸಿಕೊಡಿ. ಜನಕನು ನಮ್ಮೆಲ್ಲರ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳುತ್ತಿದ್ದಾನೆ - ಜ್ಞಾನ ಪಡೆಯುವದು ಹೇಗೆ - ಅಧ್ಯಾತ್ಮ ಜ್ಞಾನ - ಕಬ್ಬಿಣದ ಕಡಲೆ - ಅದನ್ನು ತಿಳಿಯುವದು ಹೇಗೆ? ನಂತರ ಮೋಕ್ಷ ಪಡೆಯುವದು ಹೇಗೆ? ಈ ಸುಖ-ದುಃಖಗಳಿಂದ, ಹುಟ್ಟು-ಸಾವುಗಳಿಂದ, ಜರಾ-ಮೃತ್ಯುಗಳಿಂದ ಹೇಗೆ ಪಾರಾಗುವದು? ನಾನು-ನನ್ನದು ಎಂಬ ಆಶಾ-ಪಾಶದಿಂದ ಹೊರ ಬರುವದು ಹೇಗೆ? ಅಷ್ಟಾವಕ್ರ ಉವಾಚ .. ಮುಕ್ತಿಮಿಚ್ಛಸಿ ಚೇತ್ತಾತ ವಿಷಯಾನ್ ವಿಷವತ್ತ್ಯಜ . ಕ್ಷಮಾರ್ಜವದಯಾತೋಷಸತ್ಯಂ ಪೀಯೂಷವದ್ ಭಜ .. 1-2.. ಶಬ್ದಾರ್ಥ ಮುಕ್ತಿಂ = ಮು...

ಅಷ್ಟಾವಕ್ರಗೀತಾ - ೩

ಆತ್ಮಜ್ಞಾನದ ಅವಲೋಕನ ಅಷ್ಟಾವಕ್ರ ಉವಾಚ .. ಅವಿನಾಶಿನಮಾತ್ಮಾನಮೇಕಂ ವಿಜ್ಞಾಯ ತತ್ತ್ವತಃ . ತವಾತ್ಮಜ್ಞಾನಸ್ಯ ಧೀರಸ್ಯ ಕಥಮರ್ಥಾರ್ಜನೇ ರತಿಃ .. 3-1..  ಶಬ್ದಾರ್ಥ: ಅವಿನಾಶಿನಂ =ವಿನಾಶವಿಲ್ಲದವನನ್ನು;   ಆತ್ಮಾನಂ =ಆತ್ಮನನ್ನು;   ಏಕಂ =ಏಕೈಕನನ್ನು;  ವಿಜ್ಞಾಯ =ತಿಳಿದು;  ತತ್ತ್ವತಃ =ನಿಜ ಸ್ವರೂಪದಲ್ಲಿ;  ತವ =ನಿನ್ನ;  ಆತ್ಮಜ್ಞಾನಸ್ಯ =ಆತ್ಮಜ್ಞಾನಿಯ;  ಧೀರಸ್ಯ =ಧೀರನ;  ಕಥಂ =ಹೇಗೆ;  ಅರ್ಥಾರ್ಜನೇ =ಹಣದ(ಅರ್ಥ) ಗಳಿಕೆಯಲ್ಲಿ(ಅರ್ಜನೇ);  ರತಿಃ =ಮೋಹ ಅನುವಾದ: ಅವಿನಾಶಿಯಾದ, ಅದ್ವೈತವಾದ ಆತ್ಮವನ್ನು ಅರಿತುಕೊಂಡಮೇಲೆ ಆತ್ಮಜ್ಞಾನಿಯಾದ ಧೀರನು, ಸಂಪತ್ತನ್ನು ಗಳಿಸುವದಲ್ಲಿ ಆಸಕ್ತಿಯನ್ನು ಹೇಗೆ ಇರಿಸಿಕೊಳ್ಳುತ್ತಾನೆ? ವಿವರಣೆ: ಆತ್ಮಜ್ಞಾನವನ್ನು ಹುಡುಕುತ್ತ ಜನಕನು ಅದರ ಜೊತೆಗೇ ರಾಜ್ಯಭಾರವನ್ನೂ ಮಾಡುತ್ತಿದ್ದಾನೆ. ಅದಕ್ಕಾಗಿ ಅಷ್ಟಾವಕ್ರ ಮುನಿಯು ಅವನನ್ನು ಪರೀಕ್ಷಿಸುತ್ತ ಕೇಳುತ್ತಾನೆ - ಆತ್ಮಜ್ಞಾನವನ್ನು ಪಡೆದ ಮೇಲೆಯೂ ಹೇಗೆ ಧನಸಂಪಾದನೆಯಲ್ಲಿ ಆಸಕ್ತಿ ಇರುತ್ತದೆ.  ಆತ್ಮಾಜ್ಞಾನಾದಹೋ ಪ್ರೀತಿರ್ವಿಷಯಭ್ರಮಗೋಚರೇ . ಶುಕ್ತೇರಜ್ಞಾನತೋ ಲೋಭೋ ಯಥಾ ರಜತವಿಭ್ರಮೇ .. 3-2.. ಶಬ್ದಾರ್ಥ: ಆತ್ಮ + ಅಜ್ಞಾನಾತ್ =ಆತ್ಮದ ಅಜ್ಞಾನದಿಂದ; ಅಹೋ =ಅಹೋ; ಪ್ರೀತಿಃ =ಪ್ರೀತಿ; ವಿಷಯಭ್ರಮಗೋಚರೇ =ಭ್ರಮೆಯಾದ ವಿಷಯಗಳಲ್ಲಿ; ಶುಕ್ತೇ + ಅಜ್ಞಾನತಃ =ಚಿಪ್...

ಅಷ್ಟಾವಕ್ರ ಗೀತಾ - ೫

ಲಯದ ಉಪದೇಶ ಅಷ್ಟಾವಕ್ರ ಉವಾಚ .. ನ ತೇ ಸಂಗೋಽಸ್ತಿ ಕೇನಾಪಿ ಕಿಂ ಶುದ್ಧಸ್ತ್ಯಕ್ತುಮಿಚ್ಛಸಿ . ಸಂಘಾತವಿಲಯಂ ಕುರ್ವನ್ನೇವಮೇವ ಲಯಂ ವ್ರಜ .. 5-1.. ಅಷ್ಟಾವಕ್ರನು ಜನಕನಿಗೆ ಮೋಕ್ಷದ ಮಾರ್ಗವನ್ನು ತಿಳಿಸಿ ಹೇಳುತ್ತಾ ಹೀಗೆ ಹೇಳುತ್ತಾನೆ- ನೀನು ಶುದ್ಧನು, ನಿನಗೆ ಯಾವುದರ ಸಂಗವೂ ಇಲ್ಲ   ಹೀಗಿರುವಾಗ ಏನನ್ನು ತಾನೇ ತ್ಯಜಿಸಲು ಇಚ್ಛಿಸುವೆ? ನೀನು ಶರೀರ-ಮನ-ಅಹಂಕಾರಗಳ ಮೋಹವನ್ನು ನಾಶವಾಗಿಸಿ ಲಯವನ್ನು, ಮುಕ್ತಿಯನ್ನು ಹೊಂದು ಉದೇತಿ ಭವತೋ ವಿಶ್ವಂ ವಾರಿಧೇರಿವ ಬುದ್ಬುದಃ . ಇತಿ ಜ್ಞಾತ್ವೈಕಮಾತ್ಮಾನಮೇವಮೇವ ಲಯಂ ವ್ರಜ .. 5-2.. ಸಾಗರದಿಂದ ಅಲೆಗಳು ಉದಯಿಸಿದಂತೆ, ಈ ವಿಶ್ವವೆಲ್ಲ ನಿನ್ನಿಂದಲೇ ಉದ್ಭವವಾಗುತ್ತದೆ. ಇದನ್ನು ತಿಳಿದು, ನೀನೇ ಆತ್ಮನೆಂದು ತಿಳಿದು, ಲಯವನ್ನು (ಮೋಕ್ಷವನ್ನು) ಹೊಂದು. ಪ್ರತ್ಯಕ್ಷಮಪ್ಯವಸ್ತುತ್ವಾದ್ ವಿಶ್ವಂ ನಾಸ್ತ್ಯಮಲೇ ತ್ವಯಿ . ರಜ್ಜುಸರ್ಪ ಇವ ವ್ಯಕ್ತಮೇವಮೇವ ಲಯಂ ವ್ರಜ .. 5-3.. ಹಗ್ಗ ಸರ್ಪದಂತೆ ಕಾಣುವಂತೆ, ಪ್ರತ್ಯಕ್ಷವೆನಿಸಿದರೂ ಅವಸ್ತುವಾದದ್ದರಿಂದ (ಮಿಥ್ಯೆಯಾದದ್ದರಿಂದ) ಈ ವಿಶ್ವವು ಅಮಲನಾದ(ಶುದ್ಧನಾದ) ನಿನ್ನೊಳಗೆ ಇಲ್ಲ. ಇದನ್ನು ಅರಿತು ಲಯವನ್ನು ಹೊಂದು. ಸಮದುಃಖಸುಖಃ ಪೂರ್ಣ ಆಶಾನೈರಾಶ್ಯಯೋಃ ಸಮಃ . ಸಮಜೀವಿತಮೃತ್ಯುಃ ಸನ್ನೇವಮೇವ ಲಯಂ ವ್ರಜ .. 5-4.. ನೀನಗೆ ಸುಖ-ದುಃಖಗಳು ಸಮಾನ. ಆಶಾ-ನಿರಾಶೆಗಳು ಸಮಾನ. ಜೀವನ-ಮೃತ್ಯುಗಳು ಸಮಾನ. ಈ ರೀತಿಯವನಾಗಿರುವ ನೀನು ಆತ್ಮದಲ್ಲಿ ಲಯವನ್ನು ಹೊಂದು....