Skip to main content

Posts

ಅಷ್ಟಾವಕ್ರಗೀತಾ-೭

 ಜನಕನ ಸಾಕ್ಷಾತ್ಕಾರ ಜನಕ ಉವಾಚ -  ಮಯ್ಯನಂತಮಹಾಂಭೋಧೌ ವಿಶ್ವಪೋತ ಇತಸ್ತತಃ . ಭ್ರಮತಿ ಸ್ವಾಂತವಾತೇನ ನ ಮಮಾಸ್ತ್ಯಸಹಿಷ್ಣುತಾ .. 7-1.. ನಾನೆು ಅನಂತ ಮಹಾಸಾಗರದಂತೆ ವಿಶ್ವವೆಂಬದು ಹಡಗಂತೆ. ಅದು ತನ್ನ ಗಾಳಿಯಿಂದ ಅಲ್ಲಿ ಇಲ್ಲಿ ಓಲಾಡುತ್ತದ್ದರೂ ಸಾಗರಕ್ಕೆ ಏನೂ ಆಗುವದಿಲ್ಲ. ಹಾಗೆಯೇ ವಿಶ್ವದ ಸಂಗತಿಗಳಿಂದ ನಾನು ವಿಚಲಿತನಾಗುವದಿಲ್ಲ.      ಮಯ್ಯನಂತಮಹಾಂಭೋಧೌ ಜಗದ್ವೀಚಿಃ ಸ್ವಭಾವತಃ . ಉದೇತು ವಾಸ್ತಮಾಯಾತು ನ ಮೇ ವೃದ್ಧಿರ್ನ ಚ ಕ್ಷತಿಃ .. 7-2.. ನಾನೆಂಬ ಅನಂತ ಮಹಾಸಾಗರದಲ್ಲಿ ಜಗತ್ತೆಂಬ ಅಲೆಗಳು ಉದಯಿಸಿ ಅಸ್ತವಾಗುತ್ತಲಿದ್ದರೂ ನನಗೆ ವೃದ್ಧಿ ಅಥವಾ ಕ್ಷಯವಿಲ್ಲ. ಸಾಗರದಲ್ಲಿ ಅಲೆಗಳು ಏಳುತ್ತವೆ ಹಾಗೂ ಮತ್ತೆ ನೀರಿನಲ್ಲಿ ಸೇರಿ ವಿಲೀನವಾಗುತ್ತವೆ. ಅದರಿಂದ ಸಾಗರದಲ್ಲಿ ಬದಲಾವಣೆಯಾಗುವದಿಲ್ಲ. ಹಾಗೆಯೇ ಜಗತ್ತಿನಲ್ಲಿ ಜೀವಿಗಳು ಅಲೆಯಂತೆ ಉದಯಿಸಿ ಬೆಳೆದು ನಾಶವಾದರೂ ಆತ್ಮಕ್ಕೆ ಯಾವುದೇ ರೀತಿಯ ಪರಿಣಾಮವಾಗುವದಿಲ್ಲ.  ಮಯ್ಯನಂತಮಹಾಂಭೋಧೌ ವಿಶ್ವಂ ನಾಮ ವಿಕಲ್ಪನಾ . ಅತಿಶಾಂತೋ ನಿರಾಕಾರ ಏತದೇವಾಹಮಾಸ್ಥಿತಃ .. 7-3.. ನಾನೆಂಬ ಮಹಾಸಾಗರದಲ್ಲಿ ವಿಶ್ವ ಎಂಬದು ಒಂದು ಕಲ್ಪನೆ. ಅತಿ ಶಾಂತನೂ ನಿರಾಕಾರನೂ ಆದ ನಾನು ಅದರಲ್ಲೇ(ಆ ಜ್ಞಾನದಲ್ಲೇ) ಇರುತ್ತೇನೆ. ನಾತ್ಮಾ ಭಾವೇಷು ನೋ ಭಾವಸ್ತತ್ರಾನಂತೇ ನಿರಂಜನೇ . ಇತ್ಯಸಕ್ತೋಽಸ್ಪೃಹಃ ಶಾಂತ ಏತದೇವಾಹಮಾಸ್ಥಿತಃ .. 7-4.. ನಾನು ಯಾವ ವಸ್ತುಗಳಲ್ಲೂ ಇಲ್ಲ ನ...

ಅಷ್ಟಾವಕ್ರಗೀತಾ-೮

  ಬಂಧನ ಮತ್ತು ಮುಕ್ತಿ ಅಷ್ಟಾವಕ್ರ ಉವಾಚ -  ತದಾ ಬಂಧೋ ಯದಾ ಚಿತ್ತಂ ಕಿಂಚಿದ್ ವಾಂಛತಿ ಶೋಚತಿ . ಕಿಂಚಿನ್ ಮುಂಚತಿ ಗೃಹ್ಣಾತಿ ಕಿಂಚಿದ್ ಹೃಷ್ಯತಿ ಕುಪ್ಯತಿ .. 8-1..   ಯಾವಾಗ ಮನಸ್ಸು ಏನನ್ನಾದರೂ ಆಸೆ ಪಡುವದೋ,  ಏನನ್ನಾದರೂ ಕುರಿತು ಶೋಕ  ಪಡುವದೋ ,  ಏನನ್ನಾದರೂ ಪಡೆಯುವದೋ,  ಏನನ್ನಾದರೂ ತ್ಯಜಿಸಿವದೋ,  ಏನನ್ನಾದರೂ ಕುರಿತು ಸಂತೋಷ ಪಡುವದೋ,  ಏನನ್ನಾದರೂ ಕುರಿತು ದುಃಖಿಸುವದೋ, ಆಗ ಆತ್ಮಕ್ಕೆ ಬಂಧನ ಉಂಟಾಗುತ್ತದೆ .   ತದಾ ಮುಕ್ತಿರ್ಯದಾ ಚಿತ್ತಂ ನ ವಾಂಛತಿ ನ ಶೋಚತಿ . ನ ಮುಂಚತಿ ನ ಗೃಹ್ಣಾತಿ ನ ಹೃಷ್ಯತಿ ನ ಕುಪ್ಯತಿ .. 8-2..   ಯಾವಾಗ ಮನಸ್ಸು ಏನನ್ನೂ  ಆಸೆ ಪಡುವದಿಲ್ಲವೋ,  ಏನನ್ನು  ಕುರಿತೂ ಶೋಕ  ಪಡುವದಿಲ್ಲವೋ ,  ಏನನ್ನೂ  ಪಡೆಯುವದಿಲ್ಲವೋ,  ಏನನ್ನೂ  ತ್ಯಜಿಸಿವದಿಲ್ಲವೋ,  ಏನನ್ನು ಕುರಿತು ಸಂತೋಷಪಡುವದಿಲ್ಲವೋ,  ಏನನ್ನೂ  ಕುರಿತು ದುಃಖಿಸುವದಿಲ್ಲವೋ, ಆಗ ಆತ್ಮಕ್ಕೆ ಮುಕ್ತಿ   ದೊರೆಯುತ್ತದೆ.   ತದಾ ಬಂಧೋ ಯದಾ ಚಿತ್ತಂ ಸಕ್ತಂ ಕಾಸ್ವಪಿ ದೃಷ್ಟಿಷು . ತದಾ ಮೋಕ್ಷೋ ಯದಾ ಚಿತ್ತಮಸಕ್ತಂ ಸರ್ವದೃಷ್ಟಿಷು .. 8-3..   ಯಾವಾಗ ಮನಸ್ಸು ಯಾವುದಾದರೂ ದೃಷ್ಟಿಯಲ್ಲಿ ಅಥವಾ ಜಡ ವಸ್ತುವಿನಲ್ಲಿ  ಆಸಕ್ತನಾಗುವದೋ, ಆಗ ಆತ್ಮ ಬಂಧನಕ್ಕೊಳಗಾಗ...

ಅಷ್ಟಾವಕ್ರಗೀತಾ - ೯

  ವೈರಾಗ್ಯ ಅಷ್ಟಾವಕ್ರ ಉವಾಚ- ಕೃತಾಕೃತೇ ಚ ದ್ವಂದ್ವಾನಿ ಕದಾ ಶಾಂತಾನಿ ಕಸ್ಯ ವಾ . ಏವಂ ಜ್ಞಾತ್ವೇಹ ನಿರ್ವೇದಾದ್ ಭವ ತ್ಯಾಗಪರೋಽವ್ರತೀ .. 9-1..   ಈ ಕೆಲಸ ಮಾಡಬೇಕಾದದ್ದು, ಈ ಕೆಲಸ ಮಾಡಬಾರದ್ದು ಎಂಬ ದ್ವಂದ್ವ ಎಂದಿಗೂ ಕೊನೆಯಾಗದು, ಯಾರಿಗೂ ಕೊನೆಯಾಗದು. ಇದನ್ನು ಅರಿತು ನೀನು ತ್ಯಾಗಪರನಾಗಿ, ವಿರಕ್ತನಾಗಿ, ನಿರಾಸಕ್ತನಾಗು. ಕಸ್ಯಾಪಿ ತಾತ ಧನ್ಯಸ್ಯ ಲೋಕಚೇಷ್ಟಾವಲೋಕನಾತ್ . ಜೀವಿತೇಚ್ಛಾ ಬುಭುಕ್ಷಾ ಚ ಬುಭುತ್ಸೋಪಶಮಂ ಗತಾಃ .. 9-2..   ಯಾರಲ್ಲಿ ಈ ಲೋಕದ ಚೇಷ್ಟೆಗಳನ್ನು ನೋಡಿ (ಅವುಗಳ ನಿರರ್ಥಕತೆಯನ್ನು ಅರಿತು), ಜೀವಿಸುವ ಇಚ್ಛೆ, ಜೀವನವನ್ನು ಭೋಗಿಸುವ ಇಚ್ಛೆ ಮತ್ತು ಜ್ಞಾನದ ಇಚ್ಛೆ ಇವೆಲ್ಲವೂ ನಶಿಸುವದೋ, ಅಂತವನೇ ಧನ್ಯನು. ಅನಿತ್ಯಂ ಸರ್ವಮೇವೇದಂ ತಾಪತ್ರಿತಯದೂಷಿತಂ . ಅಸಾರಂ ನಿಂದಿತಂ ಹೇಯಮಿತಿ ನಿಶ್ಚಿತ್ಯ ಶಾಮ್ಯತಿ .. 9-3..   ಈ ಜಗದಲ್ಲಿ ಕಾಣುವದೆಲ್ಲ ಅಶಾಶ್ವತ ಮತ್ತು ಮೂರು ಬಗೆಯ ನೋವಿನಿಂದ ತುಂಬಿರುವದು, ನಿಂದನೀಯ, ಸಾರವಿಲ್ಲದ್ದು, ಹೇಯವಾದದ್ದು ಎನ್ನುವ ಸತ್ಯ ತಿಳಿದಾಗ ನೀನು ಶಾಂತನಾಗುವೆ. ಕೋಽಸೌ ಕಾಲೋ ವಯಃ ಕಿಂ ವಾ ಯತ್ರ ದ್ವಂದ್ವಾನಿ ನೋ ನೃಣಾಂ . ತಾನ್ಯುಪೇಕ್ಷ್ಯ ಯಥಾಪ್ರಾಪ್ತವರ್ತೀ ಸಿದ್ಧಿಮವಾಪ್ನುಯಾತ್ .. 9-4..    ಮನುಜನಿಗೆ ಯಾವ ವಯಸ್ಸಿನಲ್ಲಿ ಅಥವಾ ಯಾವ ಕಾಲದಲ್ಲಿ ಸುಖ-ದುಃಖಗಳ, ಒಳಿತು-ಕೆಡುಕುಗಳ ದ್ವಂದ್ವ ಇರವದಿಲ್ಲ? ಅವುಗಳನ್...

ಅಷ್ಟಾವಕ್ರ ಗೀತಾ - ೧೦

 ಪ್ರಶಾಂತತೆ ಅಷ್ಟಾವಕ್ರ  ಉವಾಚ- ವಿಹಾಯ ವೈರಿಣಂ ಕಾಮಮರ್ಥಂ ಚಾನರ್ಥಸಂಕುಲಂ . ಧರ್ಮಮಪ್ಯೇತಯೋರ್ಹೇತುಂ ಸರ್ವತ್ರಾನಾದರಂ ಕುರು .. 10-1..  ವೈರಿಗಳಾದ ಕಾಮ, ಅನರ್ಥಗಳ ಸಂಕುಲವಾದ ಅರ್ಥ(ಧನ-ಕನಕ) ಮತ್ತು ಇವೆರಡಕ್ಕೂ ಹೇತುವಾದ ಧರ್ಮ (ಸತ್ಕರ್ಮ) ಈ ಮೂರನ್ನೂ ತ್ಯಜಿಸಿ, ಎಲ್ಲದರಲ್ಲೂ ಉದಾಸೀನತೆ ತೋರಿಸು.  (ನಾವು ಕರ್ಮ ಮಾಡುವದು ಸಂಪತ್ತು ಪಡೆಯಲು ಮತ್ತು ಸುಖ ಪಡೆಯಲು. ಆ ಕರ್ಮವೇ ಕಾಮ, ಅರ್ಥಗಳ ಗಳಿಕೆಗೆ  ಕಾರಣ. ಹಾಗಾಗಿ ಆ ಕರ್ಮವನ್ನೂ  ತ್ಯಜಿಸಬೇಕು. ಮೋಕ್ಷ ಪ್ರಾಪ್ತಿಗಾಗಿ ಧರ್ಮಾರ್ಥಕಾಮಗಳೆಲ್ಲವನ್ನೂ ತ್ಯಜಿಸಿ ಅವುಗಳ ಬಗ್ಗೆ ನಿರಾಸಕ್ತಿ ಹೊಂದಬೇಕು.)    ಸ್ವಪ್ನೇಂದ್ರಜಾಲವತ್ ಪಶ್ಯ ದಿನಾನಿ ತ್ರೀಣಿ ಪಂಚ ವಾ . ಮಿತ್ರಕ್ಷೇತ್ರಧನಾಗಾರದಾರದಾಯಾದಿಸಂಪದಃ .. 10-2..  ಮೂರು-ನಾಲ್ಕು ದಿನ ಬಾಳುವ ಮಿತ್ರ, ಭೂಮಿ, ಧನ, ಮನೆ, ಮಡದಿ ಈ ಐದೂ ಮೋಹಗಳನ್ನೂ ಸ್ವಪ್ನದಂತೆ, ಮಾಯಾಜಾಲದಂತೆ ನೋಡು (ಅವುಗಳನ್ನು ತ್ಯಜಿಸು).  ಯತ್ರ ಯತ್ರ ಭವೇತ್ತೃಷ್ಣಾ ಸಂಸಾರಂ ವಿದ್ಧಿ ತತ್ರ ವೈ . ಪ್ರೌಢವೈರಾಗ್ಯಮಾಶ್ರಿತ್ಯ ವೀತತೃಷ್ಣಃ ಸುಖೀ ಭವ .. 10-3..  ಎಲ್ಲೆಲ್ಲಿ ಕಾಮನೆಗಳು ಉಂಟಾಗುವದೋ, ಅಲ್ಲೆಲ್ಲ ಜಗದ ಮಾಯೆಯಿದೆ ಎಂದು ತಿಳಿ. ದೃಢ ವೈರಾಗ್ಯವನ್ನು ಅವಲಂಬಿಸಿ ಆಸೆಯಿಲ್ಲದವನಾಗಿ ಸುಖಿಯಾಗು.  ತೃಷ್ಣಾಮಾತ್ರಾತ್ಮಕೋ ಬಂಧಸ್ತನ್ನಾಶೋ ಮೋಕ್ಷ ಉಚ್ಯತೇ . ಭವಾಸಂಸಕ್ತಿಮಾತ್ರೇಣ ಪ್ರ...

ಅಷ್ಟಾವಕ್ರಗೀತಾ - ೧೧

ಜ್ಞಾನ  ಈ ಅಧ್ಯಾಯದಲ್ಲಿ ಅಷ್ಟಾವಕ್ರನು ಹೇಗೆ ಆತ್ಮಜ್ಞಾನ ಪಡೆದ ನಂತರ ಮನುಷ್ಯನು ಹೇಗೆ ಶಾಂತನು ಹಾಗೂ ಸುಖಿಯಾಗುತ್ತಾನೆ ಎಂದು ವಿವರಿಸುತ್ತಾನೆ. ಎಲ್ಲವನ್ನೂ ನಿರ್ಮಿಸಿದ ಆ ದೇವರು ಎಲ್ಲದರಲ್ಲೂ ಅಡಕವಾಗಿದ್ದಾನೆ. ಈ ಸತ್ಯವನ್ನು ಅರಿತಮೇಲೆ ಮನುಷ್ಯ ಎಲ್ಲಾ ಆಸೆಗಳನ್ನೂ ತೋರೆದು ಶಾಂತನಾಗುತ್ತಾನೆ. ವಸ್ತುಗಳ ಕ್ಷಣಿಕತೆಯನ್ನು ಅರಿತು ಅವುಗಳ ಮೇಲಿನ ಮೋಹವನ್ನು ತ್ಯಜಿಸುತ್ತಾನೆ. ಈ ಬಣ್ಣಬಣ್ಣದ ಪ್ರಪಂಚ ನಿಜವಾಗಿ ನೋಡಿದರೆ ಬರೀ ಶೂನ್ಯ ಎಂಬ ಸತ್ಯ ಅರಿತು ಸುಖಿಯಾಗುತ್ತಾನೆ. ಅಷ್ಟಾವಕ್ರ ಉವಾಚ ..   ಭಾವಾಭಾವವಿಕಾರಶ್ಚ ಸ್ವಭಾವಾದಿತಿ ನಿಶ್ಚಯೀ . ನಿರ್ವಿಕಾರೋ ಗತಕ್ಲೇಶಃ ಸುಖೇನೈವೋಪಶಾಮ್ಯತಿ .. 11-1..   ಇರುವುದು, ಇಲ್ಲದಿರುವದು ಇತ್ಯಾದಿ ಬದಲಾವಣೆಗಳು ವಸ್ತುಗಳ ಸ್ವಭಾವ ಎಂದು ತಿಳಿದವನು, ನಿರ್ವಿಕಾರನಾಗಿ, ದುಃಖರಹಿತನಾಗಿ ಸುಖ-ಸಮಾಧಾನವನ್ನು ಹೊಂದುತ್ತಾನೆ. ಜಗತ್ತಿನ ಸರ್ವ ವಸ್ತುಗಳೂ ಅಶಾಶ್ವತ, ಕ್ಷಣಿಕ ಎಂದು ಮನನ ಮಾಡಿಕೊಂಡುವನು ಐಹಿಕ ವಸ್ತುಗಳ ಬಗ್ಗೆ ಆಸೆ ಪಡುವದಿಲ್ಲ - ಅವು ಸಿಗದಾಗ ದುಃಖ ಪಡುವದೂ ಇಲ್ಲ. ಸುಖ-ಶಾಂತಿ ಹೊಂದುತ್ತಾನೆ.   ಈಶ್ವರಃ ಸರ್ವನಿರ್ಮಾತಾ ನೇಹಾನ್ಯ ಇತಿ ನಿಶ್ಚಯೀ . ಅಂತರ್ಗಲಿತಸರ್ವಾಶಃ ಶಾಂತಃ ಕ್ವಾಪಿ ನ ಸಜ್ಜತೇ .. 11-2..   ಈಶ್ವರನು ಸಕಲವನ್ನೂ ನಿರ್ಮಿಸಿದವನು. ಅವನ ಹೊರತು ಇಲ್ಲಿ ಏನೂ ಇಲ್ಲ ಎಂದು ನಿಶ್ಚಯವಾಗಿ ತಿಳಿದವನು, ಎಲ್ಲ ಆಸೆಗಳನ್ನು ತ್ಯಜಿಸಿ, ಯಾವುದಕ್ಕೂ ಅಂಟ...

ಅಷ್ಟಾವಕ್ರಗೀತಾ-೧೨

 ಜನಕನ ಸ್ಥಿತಿ  ಜನಕ ಉವಾಚ ..  ಕಾಯಕೃತ್ಯಾಸಹಃ ಪೂರ್ವಂ ತತೋ ವಾಗ್ವಿಸ್ತರಾಸಹಃ . ಅಥ ಚಿಂತಾಸಹಸ್ತಸ್ಮಾದ್ ಏವಮೇವಾಹಮಾಸ್ಥಿತಃ .. 12-1.. ಜನಕನು ಆತ್ಮಜ್ಞಾನದ ನಂತರದ ತನ್ನ ಅನುಭೂತಿಗಳನ್ನು ವರ್ಣಿಸುತ್ತ ಹೀಗೆ ಹೇಳುತ್ತಾನೆ- ಮೊದಲು ನಾನು ಕಾರ್ಯಕೃತ್ಯಗಳ ಬಗ್ಗೆ ನಿರಾಸಕ್ತನಾದೆ. ನಂತರ ಅತಿ ಮಾತುಕತೆಯ ಬಗ್ಗೆ ನಿರಾಸಕ್ತನಾದೆ. ನಂತರ ಯೋಚನೆ ಬಗ್ಗೆ ನಿರಾಸಕ್ತನಾದೆ. ಈಗ ನಾನು ಈ ಸ್ಥಿತಿಯಲ್ಲಿ ಇದ್ದೇನೆ. (ಮಾತು, ಕೃತಿ, ಚಿಂತೆ ಇವಲ್ಲವುಗಳಿಂದ ನಿರ್ಲಿಪ್ತನಾಗಿದ್ದೇನೆ) ಪ್ರೀತ್ಯಭಾವೇನ ಶಬ್ದಾದೇರದೃಶ್ಯತ್ವೇನ ಚಾತ್ಮನಃ . ವಿಕ್ಷೇಪೈಕಾಗ್ರಹೃದಯ ಏವಮೇವಾಹಮಾಸ್ಥಿತಃ .. 12-2.. ಶಬ್ದ ಇತ್ಯಾದಿ ಬಾಹ್ಯ ವಿಷಯಗಳಿಗೇ ಪ್ರೀತಿಯ ಅಭಾವದಿಂದ, ಆತ್ಮವು ಅನುಭವಕ್ಕೆ ಸಿಗದು ಎಂಬ ಸತ್ಯವನ್ನು ಅರಿತು, ಮನಸ್ಸನ್ನು ಏಕಾಗ್ರವಾಗಿಸಿ ನಾನು ಈ ಸ್ಥಿತಿಯಲ್ಲಿ ಇದ್ದೇನೆ.  ಸಮಾಧ್ಯಾಸಾದಿವಿಕ್ಷಿಪ್ತೌ ವ್ಯವಹಾರಃ ಸಮಾಧಯೇ . ಏವಂ ವಿಲೋಕ್ಯ ನಿಯಮಮೇವಮೇವಾಹಮಾಸ್ಥಿತಃ .. 12-3.. . ಸಮಾಧಿ ಸ್ಥಿತಿ ಪಡೆಯಲು ಪ್ರಯತ್ನ ಪಡಬೇಕು ಯಾಕೆಂದರೆ ಬೇರೆ, ಬೇರೆ ಕವಚಗಳು ಮನಸ್ಸನ್ನು ಗೊಂದಲಗೊಳಿಸುತ್ತವೆ . (ನಾನು ಈ ಶರೀರ, ನಾನು ಈ ಮನಸ್ಸು ಇತ್ಯಾದಿ ಮಿಥ್ಯಾಕವಚಗಳು ಸಮಾಧಿ ಪಡೆಯಲು ಅಡ್ಡಿ ಉಂಟುಮಾಡುತ್ತವೆ). ಈ ನಿಯಮವನ್ನು ನೋಡಿ, ಅರಿತು, ನಾನು ಈ ಸ್ಥಿತಿಯಲ್ಲಿ ಇದ್ದೇನೆ.  ಹೇಯೋಪಾದೇಯವಿರಹಾದ್ ಏವಂ ಹರ್ಷವಿಷಾದಯೋಃ . ಅಭಾವಾ...

ಅಷ್ಟಾವಕ್ರಗೀತೆ - ೧೩

ಸಂತೋಷ ಜನಕ ಉವಾಚ-  ಅಕಿಂಚನಭವಂ ಸ್ವಾಸ್ಥ್ಯಂ ಕೌಪೀನತ್ವೇಽಪಿ ದುರ್ಲಭಂ . ತ್ಯಾಗಾದಾನೇ ವಿಹಾಯಾಸ್ಮಾದಹಮಾಸೇ ಯಥಾಸುಖಂ .. ೧೩-೧..  ರಾಜಾ ಜನಕನು ತನ್ನ ಸ್ಥಿತಿಯನ್ನು ವಿವರಿಸುತ್ತ ಹೀಗೆ ಮುಂದುವರಿಸುತ್ತಾನೆ. (ಆತ್ಮದ ಹೊರತು)ಇನ್ನೇನೂ ಇಲ್ಲ ಎಂಬ ಭಾವನೆ, ಆ ವೈರಾಗ್ಯ, ಕೌಪೀನಧಾರಿಯಾದರೂ (ಎಲ್ಲ ತ್ಯಜಿಸಿ ಕೌಪೀನ ಮಾತ್ರ ಧರಿಸಿದರೂ) ದೊರಕುವದು ದುರ್ಲಭ. ಆದ್ದರಿಂದ ನಾನು ತ್ಯಾಗವನ್ನೂ, ಸ್ವೀಕರಿಸುವದನ್ನೂ ಎರಡನ್ನು ಬಿಟ್ಟು ಸುಖದಿಂದಿದ್ದೇನೆ. ಕುತ್ರಾಪಿ ಖೇದಃ ಕಾಯಸ್ಯ ಜಿಹ್ವಾ ಕುತ್ರಾಪಿ ಖಿದ್ಯತೇ . ಮನಃ ಕುತ್ರಾಪಿ ತತ್ತ್ಯಕ್ತ್ವಾ ಪುರುಷಾರ್ಥೇ ಸ್ಥಿತಃ ಸುಖಂ .. ೧೩-೨..  ಎಲ್ಲೋ ಒಂದೆಡೆ ಶರೀರದ ಬಾಧೆ (ಸಾಧನೆ ಮಾಡುವಾಗ), ಇನ್ನೆಲ್ಲೋ ಒಂದು ಕಡೆ ನಾಲಿಗೆಯ ಬಾಧೆ (ಶಾಸ್ತ್ರಗಳ ವಾಚನ ಮಾಡುವಾಗ), ಮತ್ತೆಲ್ಲೋ ಒಂದೆಡೆ ಮನಸ್ಸಿನ ಬಾಧೆ (ಧ್ಯಾನ ಮಾಡುವಾಗ), ಈ ಎಲ್ಲ ಬಾಧೆಗಳನ್ನೂ ತ್ಯಜಿಸಿ ನಾನು ಪುರುಷಾರ್ಥದಲ್ಲಿ ಸುಖವಾಗಿದ್ದೇನೆ. ಮನಸ್ಸು, ಶರೀರಗಳನ್ನು ತಪಸ್ಸಿನಲ್ಲಿ ತೊಡಗಿಸಿದಾಗ ನೋವು, ಬಾಧೆಗಳು ಸಹಜ. ಆದರೆ ಅವೆಲ್ಲವೂ ನನಗಲ್ಲ ಎಂಬ ನಿರಾಳತೆಯಿಂದ ಸುಖದಲ್ಲಿ ಇರುತ್ತೇನೆ. ಕೃತಂ ಕಿಮಪಿ ನೈವ ಸ್ಯಾದ್ ಇತಿ ಸಂಚಿಂತ್ಯ ತತ್ತ್ವತಃ . ಯದಾ ಯತ್ಕರ್ತುಮಾಯಾತಿ ತತ್ ಕೃತ್ವಾಸೇ ಯಥಾಸುಖಂ .. ೧೩-೩..  ತತ್ವಶ: ನೋಡಿದರೆ, ಯಾವ ಕರ್ಮವೂ ಆತ್ಮನಿಂದ ಕೃತವಲ್ಲ (ಎಲ್ಲ ಶರೀರ, ಮನ, ಬುದ್ಧಿಗಳು ಮಾಡಿದ್ದು - ಆತ್ಮವಲ್ಲ...